ಬೆಂಗಳೂರು: ಆಂಧ್ರಪ್ರದೇಶದ ಚಿತ್ತೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.
ಪ್ರಕರಣವೊಂದರ ಸಂಬಂಧ ಬೆಂಗಳೂರು ಪೊಲೀಸರು ಚಿತ್ತೂರಿನಲ್ಲಿ ಅಡಗಿದ್ದಾರೆನ್ನಲಾದ ಡ್ರಗ್ ದಂಧೆಕೋರನನ್ನು ಕರೆತರಲು ತೆರಳುತ್ತಿದ್ದರೆನ್ನಲಾಗಿದೆ. ಬಾಡಿಗೆ ಕಾರಿನಲ್ಲಿ ತೆರಳುತ್ತಿದ್ದ ಇವರ ವಾಹನ ರಸ್ತೆ ವಿಭಜಗಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಪಿಎಸ್ಐ ಅವಿನಾಶ್, ಕಾನ್ಸ್ಟೇಬಲ್ ಅನಿಲ್ ಮಲಿಕ್, ಕಾರು ಚಾಲಕನೊಬ್ಬ ಮೃತಪಟ್ಟಿದ್ದಾರೆ. ಇವರು ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರೊಬೆಷನರಿ ಪಿಎಸ್ಐ ದೀಕ್ಷಿತ್ ಗಾಗೂ ಕಾನ್ಸ್ಟೇಬಲ್ ಶರಣಬಸವ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.




















































